Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:34 - ಪರಿಶುದ್ದ ಬೈಬಲ್‌

34 ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮತ್ತು ತಾವು ಒಂದು ಕೆಲಸ ಮಾಡಬೇಕು; ದೇಶದ ಎಲ್ಲಾ ಭಾಗಗಳಲ್ಲಿಯೂ ಕರಣೀಕರನ್ನು ನೇವಿುಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರುಷಗಳಲ್ಲಿ ದೇಶದ ಬೆಳೆಯೊಳಗೆ ಐದನೆಯ ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:34
14 ತಿಳಿವುಗಳ ಹೋಲಿಕೆ  

“ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.


ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟುಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.


ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.


ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.


ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.


ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.


ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.


ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು