Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:38 - ಪರಿಶುದ್ದ ಬೈಬಲ್‌

38 ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:38
14 ತಿಳಿವುಗಳ ಹೋಲಿಕೆ  

ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.


ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.


ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.


ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.


ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.


ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು.


ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.


ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು