Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:54 - ಪರಿಶುದ್ದ ಬೈಬಲ್‌

54 ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:54
13 ತಿಳಿವುಗಳ ಹೋಲಿಕೆ  

ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.


ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.


ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು.


ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.


ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.


ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.


ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು