Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:15 - ಪರಿಶುದ್ದ ಬೈಬಲ್‌

15 ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಈ ಸ್ಥಳದಿಂದ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:15
19 ತಿಳಿವುಗಳ ಹೋಲಿಕೆ  

ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.


ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.


“ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.


ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.


ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.


ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು.


ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.


ಯೋಸೇಫನು ಅವರಿಗೆ, “ಇಲ್ಲ, ನಾನು ಹೇಳಿದಂತೆ ನೀವು ಗೂಢಚಾರರೇ.


ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು