Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:18 - ಪರಿಶುದ್ದ ಬೈಬಲ್‌

18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:18
12 ತಿಳಿವುಗಳ ಹೋಲಿಕೆ  

ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


“ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು