Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:2 - ಪರಿಶುದ್ದ ಬೈಬಲ್‌

2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:2
11 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.


ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.


ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.


ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸಧಾನ್ಯಗಳನ್ನು ಕೊಂಡುಕೊಂಡು ಬರುವೆವು.


ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.


“ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.)


ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.


ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು