ಆದಿಕಾಂಡ 42:22 - ಪರಿಶುದ್ದ ಬೈಬಲ್22 ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿ |
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.