Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:27 - ಪರಿಶುದ್ದ ಬೈಬಲ್‌

27 ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:27
9 ತಿಳಿವುಗಳ ಹೋಲಿಕೆ  

ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.


ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.


ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.


ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು.


ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.


ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು