Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:28 - ಪರಿಶುದ್ದ ಬೈಬಲ್‌

28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:28
14 ತಿಳಿವುಗಳ ಹೋಲಿಕೆ  

ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.


ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.


ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.


“ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.


ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.


ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.


ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು