Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:12 - ಪರಿಶುದ್ದ ಬೈಬಲ್‌

12 ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:12
12 ತಿಳಿವುಗಳ ಹೋಲಿಕೆ  

ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ಈ ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು.


ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.


ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.


ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ಬೆನ್ಯಾಮೀನನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ಹಿಂತಿರುಗಿ ಹೋಗಿರಿ.


ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು