Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:16 - ಪರಿಶುದ್ದ ಬೈಬಲ್‌

16 ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:16
12 ತಿಳಿವುಗಳ ಹೋಲಿಕೆ  

ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.


ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.


ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ.


ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.


ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು.


ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.


ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.


ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು