Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:18 - ಪರಿಶುದ್ದ ಬೈಬಲ್‌

18 ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:18
20 ತಿಳಿವುಗಳ ಹೋಲಿಕೆ  

ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.


ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.


ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ಅವರು ಗೋಡೆಯನ್ನು ಒಡೆದು ನುಗ್ಗಿಬರಲು ಕಲ್ಲುಗಳು ನನ್ನ ಮೇಲೆ ಬೀಳುವವು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ. “ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ” ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು.


‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ,


ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.


ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.


ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು.


ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.


ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.


ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.


ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು