Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:19 - ಪರಿಶುದ್ದ ಬೈಬಲ್‌

19 ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮನೆಯ ಬಾಗಿಲ ಬಳಿ ಗೃಹನಿರ್ವಾಹಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:19
8 ತಿಳಿವುಗಳ ಹೋಲಿಕೆ  

ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.


ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು.


ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.


ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.


ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.


ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.


“ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.


ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು