Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:27 - ಪರಿಶುದ್ದ ಬೈಬಲ್‌

27 ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:27
12 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.


ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.


ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.


ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.


ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.


ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.


ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ಷ್ಮವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.


ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.


ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು