Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:3 - ಪರಿಶುದ್ದ ಬೈಬಲ್‌

3 ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:3
13 ತಿಳಿವುಗಳ ಹೋಲಿಕೆ  

ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.


ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.


“ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.


ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿದನು.


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.


ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.


ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.


ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.


ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸಧಾನ್ಯಗಳನ್ನು ಕೊಂಡುಕೊಂಡು ಬರುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು