Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:16 - ಪರಿಶುದ್ದ ಬೈಬಲ್‌

16 ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:16
15 ತಿಳಿವುಗಳ ಹೋಲಿಕೆ  

ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.


ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)


ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಅನಂತರ ರಾಜನಿಗೆ ಇಷ್ಟವಾದ ಕನ್ನಿಕೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು.


ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು.


ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.


ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.


ಅವರು ಹೇಳಿದ್ದು ಹಮೋರನಿಗೂ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.


ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು.


ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.


ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.


ಆದ್ದರಿಂದ ಫರೋಹನು ಯೋಸೇಫನಿಗೆ, “ತಮಗೆ ಬೇಕಾದ ಎಲ್ಲಾ ಆಹಾರವನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹಿಂತಿರುಗಿ ಹೋಗಿ


ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು