Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:18 - ಪರಿಶುದ್ದ ಬೈಬಲ್‌

18 ನಿನ್ನ ತಂದೆಯನ್ನೂ ತಮ್ಮ ಕುಟುಂಬಗಳನ್ನೂ ನನ್ನ ಬಳಿಗೆ ಕರೆದುಕೊಂಡು ಬರಲಿ. ಅವರು ಈಜಿಪ್ಟಿನ ಒಳ್ಳೆಯ ಪ್ರದೇಶದಲ್ಲಿ ವಾಸಿಸಲಿ. ಇಲ್ಲಿರುವ ಉತ್ತಮವಾದ ಆಹಾರವನ್ನು ಅವರು ಊಟಮಾಡಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ಐಗುಪ್ತದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು, ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:18
11 ತಿಳಿವುಗಳ ಹೋಲಿಕೆ  

ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.


ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ.


ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.


ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.


“ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.


ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಆದ್ದರಿಂದ ಫರೋಹನು ಯೋಸೇಫನಿಗೆ, “ತಮಗೆ ಬೇಕಾದ ಎಲ್ಲಾ ಆಹಾರವನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹಿಂತಿರುಗಿ ಹೋಗಿ


ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು