Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:21 - ಪರಿಶುದ್ದ ಬೈಬಲ್‌

21 ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:21
12 ತಿಳಿವುಗಳ ಹೋಲಿಕೆ  

ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.


ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.


ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಮೋಶೆ ಯೆಹೋವನಿಗೆ ವಿಧೇಯನಾಗಿ ಅವರೆಲ್ಲರನ್ನೂ ಲೆಕ್ಕಿಸಿದನು.


ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ.


ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.


ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.


ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು