Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:26 - ಪರಿಶುದ್ದ ಬೈಬಲ್‌

26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:26
17 ತಿಳಿವುಗಳ ಹೋಲಿಕೆ  

ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.


ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.


ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.


“ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು.


ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು.


“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.


ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!


ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು.


ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.


ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.


ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು.


ಆದ್ದರಿಂದ ಸಹೋದರರು ಈಜಿಪ್ಟನ್ನು ಬಿಟ್ಟು, ತಮ್ಮ ತಂದೆಯಿರುವ ಕಾನಾನ್ ದೇಶಕ್ಕೆ ಹೋದರು.


ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,


ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು