27 ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.
27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
27 ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -
27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.
ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದ್ದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.