Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:3 - ಪರಿಶುದ್ದ ಬೈಬಲ್‌

3 ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಅಣ್ಣಂದಿರಿಗೆ - ನಾನು ಯೋಸೇಫನು; ನನ್ನ ತಂದೆ ಇನ್ನೂ ಇದ್ದಾನೋ ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:3
14 ತಿಳಿವುಗಳ ಹೋಲಿಕೆ  

ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.


ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ.


ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.


ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.


ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.


ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.


ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು