Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:5 - ಪರಿಶುದ್ದ ಬೈಬಲ್‌

5 ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:5
21 ತಿಳಿವುಗಳ ಹೋಲಿಕೆ  

ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.


ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ನೀನು ಬತ್ಷೆಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು’” ಎಂದು ಹೇಳಿದನು.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಒನೇಸಿಮನು ಸ್ವಲ್ಪಕಾಲ ನಿನ್ನನ್ನು ಅಗಲಿದ್ದನು. ಬಹುಶಃ ಅವನು ಎಂದೆಂದಿಗೂ ನಿನ್ನವನಾಗಬೇಕೆಂದು ಹಾಗಾಯಿತೇನೊ!


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ.


ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.


ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು