Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:6 - ಪರಿಶುದ್ದ ಬೈಬಲ್‌

6 ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:6
13 ತಿಳಿವುಗಳ ಹೋಲಿಕೆ  

ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.


ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.


ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.


“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.


ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.


ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.


ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ


ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು