Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:20 - ಪರಿಶುದ್ದ ಬೈಬಲ್‌

20 ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:20
15 ತಿಳಿವುಗಳ ಹೋಲಿಕೆ  

ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.


ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.


ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)


ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು