Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:29 - ಪರಿಶುದ್ದ ಬೈಬಲ್‌

29 ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ಗೋಷೆನ್‍ಸೀಮೆಗೆ ಬಂದಾಗ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವದಕ್ಕೋಸ್ಕರ ಗೋಷೆನಿಗೆ ಹೋಗಿ ಅವನಿಗೆ ಕಾಣಿಸಿಕೊಂಡು ತಂದೆಯನ್ನು ಬಹಳ ಹೊತ್ತಿನವರೆಗೆ ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:29
11 ತಿಳಿವುಗಳ ಹೋಲಿಕೆ  

ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.


ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.


ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.


ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.


ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.


ಆಮೇಲೆ ಯೋಸೇಫನು ಗಟ್ಟಿಯಾಗಿ ಅತ್ತನು. ಫರೋಹನ ಮನೆಯಲ್ಲಿದ್ದ ಈಜಿಪ್ಟಿನವರೆಲ್ಲ ಅದನ್ನು ಕೇಳಿಸಿಕೊಂಡರು.


ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.


ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು