Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:18 - ಪರಿಶುದ್ದ ಬೈಬಲ್‌

18 ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ವರುಷ ಕಳೆದನಂತರ ಅವರು ಎರಡನೆಯ ವರುಷದಲ್ಲಿ ಅವನ ಬಳಿಗೆ ಬಂದು - ನಮ್ಮ ಹಣವೆಲ್ಲಾ ವೆಚ್ಚವಾಗಿ ಹೋಗಿದೆ; ನಮ್ಮ ಕುರಿದನಗಳು ಸ್ವಾವಿುಯ ವಶವಾದವು; ಹೀಗಿರುವದರಿಂದ ನಮ್ಮ ಭೂವಿುಯೂ ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾವಿುಗೆ ಮರೆಮಾಜದೆ ತಿಳಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:18
4 ತಿಳಿವುಗಳ ಹೋಲಿಕೆ  

ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.


ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.


ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು