Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:6 - ಪರಿಶುದ್ದ ಬೈಬಲ್‌

6 ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:6
24 ತಿಳಿವುಗಳ ಹೋಲಿಕೆ  

ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.


ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು


ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.


ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.


ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು.


ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.


ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು.


ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು.


ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು.


ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.


ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದ್ದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು