Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:16 - ಪರಿಶುದ್ದ ಬೈಬಲ್‌

16 ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:16
46 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.


“ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.


ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.


ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.


ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.


ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


“‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.”


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.


ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 6,03,550.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.


ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ,


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ದಾವೀದನು ರಿಮ್ಮೋನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣೆಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ.


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು