Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:17 - ಪರಿಶುದ್ದ ಬೈಬಲ್‌

17 ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:17
13 ತಿಳಿವುಗಳ ಹೋಲಿಕೆ  

ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.


ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.


ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು.


ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.


ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.


ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು