Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:20 - ಪರಿಶುದ್ದ ಬೈಬಲ್‌

20 ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:20
13 ತಿಳಿವುಗಳ ಹೋಲಿಕೆ  

ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)


ಯೋಸೇಫನ ಮಗನಾದ ಮನಸ್ಸೆ ಕುಲದಿಂದ ಸೂಸೀಯ ಮಗನಾದ ಗದ್ದೀ,


ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,


ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.


ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು