Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:1 - ಪರಿಶುದ್ದ ಬೈಬಲ್‌

1 ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:1
28 ತಿಳಿವುಗಳ ಹೋಲಿಕೆ  

ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


“ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು?


‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


“ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು