Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:10 - ಪರಿಶುದ್ದ ಬೈಬಲ್‌

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:10
58 ತಿಳಿವುಗಳ ಹೋಲಿಕೆ  

“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.


ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.


ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.


ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.”


ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


“ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.


ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು.


ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.


ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.


ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.


ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.


ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


“ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.


ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.


ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?


ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು