Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:11 - ಪರಿಶುದ್ದ ಬೈಬಲ್‌

11 ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:11
15 ತಿಳಿವುಗಳ ಹೋಲಿಕೆ  

“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”


ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.


ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು.


ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ.”


ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.


ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು