Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:15 - ಪರಿಶುದ್ದ ಬೈಬಲ್‌

15 ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವದನ್ನು ನೋಡಿ ಅವನು ಹೊರೆಯನ್ನು ಹೊರುವದಕ್ಕೆ ಬೆನ್ನು ಬೊಗ್ಗಿಸಿಕೊಂಡು ಬಿಟ್ಟೀ ಕೆಲಸವನ್ನು ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:15
10 ತಿಳಿವುಗಳ ಹೋಲಿಕೆ  

ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.


“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”


ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.


ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


“ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು.


“ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ, ದಾನನು ತನ್ನ ಸ್ವಂತ ಜನರಿಗೆ ತೀರ್ಪು ಮಾಡುತ್ತಾನೆ.


ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು