Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:26 - ಪರಿಶುದ್ದ ಬೈಬಲ್‌

26 ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ತಂದೆಯ ಆಶೀರ್ವಾದಗಳು ಆದಿಯಿಂದಿದ್ದ ಪರ್ವತಗಳಿಂದುಟಾಗುವ ಮೇಲುಗಳಿಗಿಂತಲೂ ಸದಾಕಾಲವಾಗಿರುವ ಬೆಟ್ಟಗಳಿಂದುಂಟಾಗುವ ಉತ್ತಮ ವಸ್ತುಗಳಿಗಿಂತಲೂ ವಿಶೇಷವಾಗಿವೆ. ಇವೆಲ್ಲಾ ಯೋಸೇಫನ ಪಾಲಿಗೆ ಬರಲಿ; ಅಣ್ಣತಮ್ಮಂದಿರಲ್ಲಿ ಪ್ರಭುವಾಗಿರುವವನ ಶಿರಸ್ಸಿನ ಮೇಲುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:26
18 ತಿಳಿವುಗಳ ಹೋಲಿಕೆ  

ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.


ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.


“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


“ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು