Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:28 - ಪರಿಶುದ್ದ ಬೈಬಲ್‌

28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:28
16 ತಿಳಿವುಗಳ ಹೋಲಿಕೆ  

ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.


ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!


ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.


“ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”


ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು