Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:33 - ಪರಿಶುದ್ದ ಬೈಬಲ್‌

33 ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆಕೊಡುವದನ್ನು ಮುಗಿಸಿದನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟು ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:33
22 ತಿಳಿವುಗಳ ಹೋಲಿಕೆ  

ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.


ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.


“ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.


ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.


ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು.


ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು.


ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು