Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:6 - ಪರಿಶುದ್ದ ಬೈಬಲ್‌

6 ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:6
29 ತಿಳಿವುಗಳ ಹೋಲಿಕೆ  

ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.


ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.


ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.


ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?


ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.


ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ


ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ!


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.


ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.


ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.


ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.


ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು