Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:8 - ಪರಿಶುದ್ದ ಬೈಬಲ್‌

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:8
38 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.


ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”


ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ.


“‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.


ಆದರೆ ಆಶೇರ್, ಮನಸ್ಸೆ ಮತ್ತು ಜೆಬುಲೂನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಜೆರುಸಲೇಮಿಗೆ ಹೋದರು.


ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.


ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.


ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.


ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.


ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.


ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 76,500.


ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.


ಯೆಹೂದನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 74,600.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.


ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


“ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.


ದೇವರು ವಾಗ್ದಾನ ಮಾಡಿದ ಭೂಮಿಯನ್ನು ಯೆಹೂದ ಕುಲವು ಪಡೆದುಕೊಂಡಿತು. ಪ್ರತಿಯೊಂದು ಗೋತ್ರವು ಆ ಭೂಮಿಯ ಸ್ವಲ್ಪ ಭಾಗವನ್ನು ಪಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು