Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:19 - ಪರಿಶುದ್ದ ಬೈಬಲ್‌

19 ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:19
11 ತಿಳಿವುಗಳ ಹೋಲಿಕೆ  

ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ.


ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.


“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.


ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು