Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:25 - ಪರಿಶುದ್ದ ಬೈಬಲ್‌

25 ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:25
10 ತಿಳಿವುಗಳ ಹೋಲಿಕೆ  

ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)


ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.


ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)


‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು