Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:11 - ಪರಿಶುದ್ದ ಬೈಬಲ್‌

11-12 ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:11
22 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.


ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”


ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವೆ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.


ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.


ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.


ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು. ಈ ಪಟ್ಟಣದಲ್ಲಿ ಹಿಂಸೆಕಲಹಗಳು ಕಾಣುತ್ತಿವೆ.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.


ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು