Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:23 - ಪರಿಶುದ್ದ ಬೈಬಲ್‌

23 ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:23
21 ತಿಳಿವುಗಳ ಹೋಲಿಕೆ  

ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಬಳಿಕ ಆ ಲೋಕವು ಜಲಪ್ರಳಯದಿಂದ ನಾಶವಾಯಿತು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.


ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು