Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:1 - ಪರಿಶುದ್ದ ಬೈಬಲ್‌

1 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:1
35 ತಿಳಿವುಗಳ ಹೋಲಿಕೆ  

ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.


ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.


ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೋ.


ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.


ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.


ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.


ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.


“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.


ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.


ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.


ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.


ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.


ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು