Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:22 - ಪರಿಶುದ್ದ ಬೈಬಲ್‌

22 ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವದನ್ನು ಕಂಡು ಹೊರಗಿದ್ದ ಅಣ್ಣತಮ್ಮಂದಿರಾದ ಶೇಮ್ ಯೆಫೆತರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:22
17 ತಿಳಿವುಗಳ ಹೋಲಿಕೆ  

ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ.


“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.


ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.


ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಚ್ರಯಿಮ್, ಪೂಟ್ ಮತ್ತು ಕಾನಾನ್.


ಆದ್ದರಿಂದ ನೋಹನು, “ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.


ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.


ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು