Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:5 - ಪರಿಶುದ್ದ ಬೈಬಲ್‌

5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:5
14 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.


ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು