Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:8 - ಪರಿಶುದ್ದ ಬೈಬಲ್‌

8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:8
17 ತಿಳಿವುಗಳ ಹೋಲಿಕೆ  

ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


“ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು.


ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.


“ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಬಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”


ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.


ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು