Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:10 - ಪರಿಶುದ್ದ ಬೈಬಲ್‌

10 “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:10
42 ತಿಳಿವುಗಳ ಹೋಲಿಕೆ  

ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.


ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.


“ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”


ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು