Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:4 - ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:4
16 ತಿಳಿವುಗಳ ಹೋಲಿಕೆ  

“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.


ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.


ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.


“ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು