Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:5 - ಪರಿಶುದ್ದ ಬೈಬಲ್‌

5 ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:5
19 ತಿಳಿವುಗಳ ಹೋಲಿಕೆ  

“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’”


ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?


“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು